ಹೊಸದಿಗಂತ ವರದಿ ಬಾಗಲಕೋಟೆ:
ತುಂಬಿದ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಂಗಾಪೂಜೆ, ಮತ್ತು ಬಾಗಿನ ಅರ್ಪಣೆ ಮಾಡಿದರು.
ಬೆಳಗ್ಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿ ಯವರು ದೋತರಾ ಹಾಗೂ ರುಮಾಲು ಸುತ್ತಿ ಹಾಗೂ ಶಾಲು ತೊಟ್ಟು ಬಾಗಿನ ಅರ್ಪಿಸಲು ಆಗಮಿಸಿದ್ದು ಆಕರ್ಷಣೀಯವಾಗಿತ್ತು
ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ,ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ಮಾಜಿ ಶಾಸಕ ಎಸ್.ಕೆ.ಬೆಳ್ಳುಬ್ಬಿ, ಅವಳಿ ಜಿಲ್ಲೆಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.