ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದಲ್ಲಿ ಕಾಂತಾರ ಚಿತ್ರ ಅಬ್ಬರಿಸುತ್ತಿದ್ದು, ಬಹುದೊಡ್ಡ ಯಶಸ್ಸಿನತ್ತ ಸಾಗುತ್ತಿದೆ. ಚಿತ್ರದ ನಾಯಕ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕಾಲಿಗೆ ಚಕ್ರ ಕಟ್ಟಿದ್ದಂತೆ ದೇಶದೆಲ್ಲೆಡೆ ಸಂಚರಿಸುತ್ತಿದ್ದಾರೆ.
ಇದರ ನಡುವೆ ರಿಷಬ್ ಶೆಟ್ಟಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದು,ಪ್ರೊ ಕಬಡ್ಡಿ ಪಂದ್ಯಕ್ಕೆ ರಾಷ್ಟ್ರಗೀತೆ ಹಾಡುವ ಮೂಲಕ ಚಾಲನೆ ನೀಡಿದರು.
ಪ್ರತಿದಿನದ ಕಬಡ್ಡಿ ಪಂದ್ಯಗಳಿಗೆ ರಾಷ್ಟ್ರಗೀತೆ ಹಾಡುವ ಮೂಲಕ ಚಾಲನೆ ನೀಡುವುದು ಪಿಕೆಎಲ್ನ ವಾಡಿಕೆ. ಅದಕ್ಕೆ ಗಣ್ಯರನ್ನು, ಪ್ರಖ್ಯಾತರನ್ನು ಇದಕ್ಕಾಗಿ ಕರೆಸುತ್ತದೆ. ಪ್ರಸ್ತುತ ರಿಷಭ್ ಅವರಿಂದ ರಾಷ್ಟ್ರಗೀತೆ ಹಾಡಿಸಿ ಸೂಪರ್ ಸಂಡೇ ಮ್ಯಾಚ್ಗಳಿಗೆ ಚಾಲನೆ ನೀಡಲಾಗಿದೆ.
ಪುಣೇರಿ ಪಲ್ಟನ್ ಹಾಗೂ ಯು ಮುಂಬಾ ನಡುವಿನ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿ ಚಾಲನೆ ನೀಡಿದರು. ಇದೇ ವೇಳೆ ಬೆಂಗಳೂರು ಬುಲ್ಸ್ ತಂಡಕ್ಕೂ ತಮ್ಮ ಶುಭ ಕೋರಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೂಡ ಭಾನುವಾರದ ಪಂದ್ಯಗಳ ವೀಕ್ಷಣೆ ಮಾಡಿದ್ದಾರೆ.