February 5, 2026
Thursday, February 5, 2026
spot_img

ದೆಹಲಿಯ ಸ್ಫೋಟದ ಹಿಂದೆ ಪಾಕಿಸ್ತಾನದ ಕೈವಾಡ: ಸಿಎಂ ಫಡ್ನವೀಸ್ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟದ ಹಿಂದೆ ಪಾಕಿಸ್ತಾನವೇ ಇದೆ ಎಂಬ ಗಂಭೀರ ಆರೋಪವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಡಿದ್ದಾರೆ. ನೇರ ಯುದ್ಧದಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಿಲ್ಲದ ಕಾರಣ, ಪಾಕಿಸ್ತಾನವು ಭಯೋತ್ಪಾದಕ ದಾಳಿಗಳ ಮೂಲಕ ಅಸ್ಥಿರತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಪಹಲ್ಗಾಮ್ ದಾಳಿ ಸೇರಿದಂತೆ ಇತ್ತೀಚೆಗೆ ನಡೆದ ದೆಹಲಿ ಸ್ಫೋಟವೂ ಇದೇ ರೀತಿ ರೂಪುಗೊಂಡ ದಾಳಿಯ ಭಾಗವಾಗಿದ್ದು, ಭಾರತದ ಭದ್ರತಾ ವ್ಯವಸ್ಥೆಯನ್ನು ಗುರಿಯಾಗಿಸುವ ಉದ್ದೇಶ ಹೊಂದಿದೆ ಎಂದು ಫಡ್ನವೀಸ್ ಹೇಳಿದ್ದಾರೆ. ಮುಂಬೈ ಮತ್ತು ಅನೇಕ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಬಳಸಲಾಗುತ್ತಿದ್ದ 3,000 ಕೆಜಿ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸುತ್ತಾ, ವೈಟ್‌ ಕಾಲರ್‌ ಭಯೋತ್ಪಾದಕ ಮಾಡ್ಯೂಲ್‌ ಅನ್ನು ಭೇದಿಸಿದ ಭದ್ರತಾ ಸಂಸ್ಥೆಗಳ ಕಾರ್ಯಾಚರಣೆಯನ್ನು ಶ್ಲಾಘಿಸಿದರು.

ಭಾರತ ಈಗ ಬದಲಾಗಿದೆ, ಭಯೋತ್ಪಾದನೆಯ ಪ್ರತಿಯೊಂದು ಚಲನವಲನವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಷ್ಟು ಬಲಿಷ್ಠ ರಾಷ್ಟ್ರವಾಗಿದೆ ಎಂದು ಅವರು ಹೇಳಿದರು. “ಪಾಕಿಸ್ತಾನದ ಉದ್ದೇಶ ಭಾರತದ ನಗರಗಳಲ್ಲಿ ಅಸ್ಥಿರತೆ ಸೃಷ್ಟಿಸುವುದು. ಆದರೆ ನಮ್ಮ ಏಜೆನ್ಸಿಗಳು ಅವರ ಯತ್ನಗಳನ್ನು ವಿಫಲಗೊಳಿಸುತ್ತಿವೆ. ಅವರು ದೆಹಲಿಯ ಸ್ಫೋಟದ ಮೂಲಕ ತಾವು ಇನ್ನೂ ಕ್ರಿಯಾಶೀಲರಾಗಿದ್ದೇವೆ ಎಂದು ತೋರಿಸಿಕೊಳ್ಳಲು ಯತ್ನಿಸುತ್ತಿದ್ದಾರೆ,” ಎಂದು ಫಡ್ನವೀಸ್ ಆರೋಪಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !