ರಾಜ್ಯದಲ್ಲಿ ಮತ್ತೆ ಹಾಲಿನ ದರ ಹೆಚ್ಚಳ: ಸಚಿವ ಸೋಮಶೇಖರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮತ್ತೆ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಮತ್ತೆ ಪ್ರಸ್ತಾವನೆ ಬಂದಿರುವುದಾಗಿ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲಿನ ದರ ಹೆಚ್ಚಿಸಬೇಕು ಎಂದು 14 ಹಾಲು ಉತ್ಪಾದಕರ ಸಂಘಗಳು ಮನವಿ ಮಾಡಿವೆ.
ದರ ಹೆಚ್ಚಿಸಿದರೆ ಆ ಹಣ ರೈತರಿಗೆ ನೀಡುವುದಾಗಿ ಉತ್ಪಾದಕ ಸಂಘಟನೆಗಳು ಹೇಳಿವೆ ಎಂದು ತಿಳಿಸಿದರು.
ಆದರೆ ಗ್ರಾಹಕರು ಹಾಲಿನ ದರ ಹೆಚ್ಚಳ ಮಾಡದಂತೆ ಒತ್ತಡ ಹಾಕುತ್ತಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!