ನಾಗರಿಕರಿಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸುವ ಮನೋಭಾವ ಬರಬೇಕು: ಡಾ.ಮಾಲತಿ ಪ್ರಿಯಾ ಎಂ

ಹೊಸದಿಗಂತ ವರದಿ ಮೈಸೂರು:
ಪೊಲೀಸ್ ಮಹಾನಿರೀಕ್ಷಕರು ದಕ್ಷಿಣ ವಲಯ ಹಾಗೂ ಮೈಸೂರು ನಗರ ಮೈಸೂರು ಜಿಲ್ಲೆ, ಕರ್ನಾಟಕ ಪೊಲೀಸ್ ಅಕಾಡೆಮಿ, ಕೆ ಎಸ್ ಆರ್ ಪಿ ಪೊಲೀಸ್ ಘಟಕಗಳ ವತಿಯಿಂದ ಮೈಸೂರು ಜಿಲ್ಲಾ ಪೊಲೀಸ್ ಕಛೇರಿಯ ಪಕ್ಕದಲ್ಲಿರುವ ಹುತಾತ್ಮರ ಸ್ಮಾರಕ ಉದ್ಯಾನವನದಲ್ಲಿ ಇಂದು ಭಾರತ ದೇಶಾದ್ಯಂತ ಕರ್ತವ್ಯದಲ್ಲಿ ನಿರತರಾಗಿದ್ದಾಗ ಮೃತಪಟ್ಟ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ತ್ಯಾಗ ಬಲಿದಾನ ಮತ್ತು ಸೇವೆಯನ್ನು ಸ್ಮರಿಸುವ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಮಾಲತಿ ಪ್ರಿಯಾ ಎಂ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿ, ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮರಾದ ಧೈರ್ಯಶಾಲಿ ಪೊಲೀಸ್ ಸಿಬ್ಬಂದಿಯನ್ನು ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತೇವೆ. ಪೊಲೀಸ್ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತಾರೆ. ಅವರು ತಮ್ಮ ಜೀಓವದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ. ಅವರಿಗೆ ಬಹಳ ಗೌರವ ನೀಡುವ ಕೆಲಸ ನಮ್ಮದಾಗಬೇಕು. ನಾಗರಿಕರಿಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸುವ ಮನೋಭಾವ ಬರಬೇಕು ಎಂದರು.

ಮೃತರ ಗೌರವಾರ್ಥ ಮೂರು ಸುತ್ತು ಗಾಳಿಯಲ್ಲಿ ಫೈರಿಂಗ್ ನಡೆಸಲಾಯಿತು. ಈ ಸಂದರ್ಭ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ , ಡಿಸಿಪಿಗಳಾದ ಗೀತ ಪ್ರಸನ್ನ ಎಂ.ಎಸ್, ಪ್ರದೀಪ್ ಗುಂಟಿ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!