Friday, November 28, 2025

ಇಂದು ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ: ಸಿಎಂ-ಡಿಸಿಎಂ ಮಾತುಕತೆ ಮುನ್ನ ʻಹೈʼ ಮೀಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ ಸಾಧ್ಯತೆಯಿದ್ದು, ಇನ್ನೆರಡು ದಿನಗಳಲ್ಲಿ ಸಂಧಾನ ಸೂತ್ರ ಹೊರಬೀಳಲಿದೆ. ಅಲ್ಲದೇ ಸಿಎಂ-ಡಿಸಿಎಂ ಮುಖಾಮುಖಿ ಆಗುವುದಕ್ಕೂ ಮುನ್ನ ಹೈಕಮಾಂಡ್‌ಗೆ ಕ್ಲ್ಯಾರಿಟಿಯ ಅಗತ್ಯವಿದೆ. ಹೀಗಾಗಿ ಇಂದು ನಿರ್ಣಾಯಕ ಸಭೆ ನಡೆಸಲಿದೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ.

ದೆಹಲಿಯ ಕಾಂಗ್ರೆಸ್‌ ಭವನದಲ್ಲಿಂದು ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ನಡೆಯಲಿದ್ದು, ಯಾರು ಸಿಎಂ ಬೇಕು ಅನ್ನೋದರ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ , ವೇಣುಗೋಪಾಲ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಒಟ್ಟು ಸೇರಿ ಇಂದು ಸಭೆ ನಡೆಸಲಿದ್ದಾರೆ ಅಂತ ಹೇಳಲಾಗ್ತಿದೆ. ಇಂದಿನ ಸಭೆಯಲ್ಲಿ ಪವರ್ ಶೇರಿಂಗ್ ವಿಚಾರದಲ್ಲಿ ಹೈಕಮಾಂಡ್ ನಿಲುವು ಧನಿರಬೇಕು ಎಂಬ ವಿಚಾರದಲ್ಲಿ ಒಂದು ಕ್ಲಾರಿಟಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಎಂ-ಡಿಸಿಎಂ ಇಬ್ಬರ ನಡುವಿನ ಸಂಧಾನ ಸೂತ್ರಕ್ಕೆ ಯಾವ ಮಾನದಂಡ? ಏನು ಸಂಧಾನ ಫಾರ್ಮುಲಾ ಎಂಬುದನ್ನ ಹೈಕಮಾಂಡ್ ಇಂದು ನಿಗದಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

error: Content is protected !!