ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಪುನೀತ್ ರಾಜ್ ಕುಮಾರ್ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವ ಕುರಿತು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಪಠ್ಯ ಪುಸ್ತಕದಲ್ಲಿ ಸೇರಿಸುವ ಕುರಿತು ಮನವಿ ಬಂದಿದ್ದು, ಪುನೀತ್ ಹಲವು ಸಾಧನೆ , ಸಮಾಜಮುಖಿ ಕೆಲಸ ಮಾಡಿದ್ದಾರೆ. ಪುನೀತ್ ಜೀವನ ಸಾಧನೆ ಪಠ್ಯದಲ್ಲಿ ಸೇರಬೇಕು, ಈ ಬಗ್ಗೆ ಸಿಎಂ, ಶಿಕ್ಷಣ ಸಚಿವರು ತೀರ್ಮಾನ ಕೈಗೊಳ್ಳಲಿದ್ದಾರೆ. ಮುಂದಿನ ವರ್ಷ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.
ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷವೇ ಕಳೆದಿದೆ. ಆದರೂ ಕೂಡ ಅಭಿಮಾನಿಗಳಿಗಂತೂ ಇನ್ನೂ ನೆನಪು ಹಾಗೆ ಉಳಿದಿದೆ.ಪುನೀತ್ ರಾಜ್ ಕುಮಾರ್ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿಮಾನಿಗಳು ಮನವಿ ಮಾಡಿದ್ದಾರೆ.
ಈಗಾಗಲೇ 6ನೇ ತರಗತಿ ಪಠ್ಯ ದಲ್ಲಿ ಡಾ. ರಾಜ್ ಕುಮಾರ್ ಜೀವನ ಸಾಧನೆ ಪಠ್ಯ ಸೇರಿಸಲಾಗಿದೆ.