ಜಮೀನಿನ ಫೋಡಿ ಮಾಡಿಸಲು ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಲೋಕಾಯುಕ್ತರ ಬಲೆಗೆ

ದಿಗಂತ ವರದಿ ವಿಜಯಪುರ:

ಜಿಲ್ಲೆಯಲ್ಲಿ ಜಮೀನಿನ ಫೋಡಿ ಮಾಡಿಸಲು ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.

ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಸರ್ವೇಯರ್ ಸುರೇಶ ಮಾಳಿ, ಆಲಮೇಲ ಪಟ್ಟಣದ ರೈತನಿಂದ 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ಜಮೀನಿನ ಪೋಡಿ ಮಾಡಿಸಲು ರೈತನಿಂದ 28 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸುರೇಶ ಮಾಳಿ, ಮುಂಗಡವಾಗಿ 18 ಸಾವಿರ ಹಣ ಪಡೆದಿದ್ದ. ಮಂಗಳವಾರ 10 ಸಾವಿರ ರೂಪಾಯಿ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ.

ಲೋಕಾಯುಕ್ತ ಎಸ್ ಪಿ ಅನಿತಾ ಹದ್ದನ್ನವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿ ಅರುಣ ನಾಯಕ, ಇನ್ಸಪೆಕ್ಟರ್ ಆನಂದ ಠಕ್ಕಣ್ಣನವರ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!