ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ಮೋರ್ಬಿ ಸೇತುವೆ ಕುಸಿತ ದುರಂತಾದ ಬಗ್ಗೆ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.
ದುರಂತದ ತನಿಖೆಗೆ ನ್ಯಾಯಾಂಗ ಆಯೋಗವನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವೀಕರಿಸಿದ ಕೋರ್ಟ್ ನ.14 ರಂದು ವಿಚಾರಣೆಗೆ ಪಟ್ಟಿ ಮಾಡುವುದಾ ಮಂಗಳವಾರ ಹೇಳಿದೆ.
ವಕೀಲ ವಿಶಾಲ್ ತಿವಾರಿ ಅವರು ತುರ್ತು ವಿಚಾರಣೆಗಾಗಿ ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪ್ರಸ್ತಾಪಿಸಿದಾಗ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾ.ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠವು, ನೀವು ಬಹಳ ಫಾಸ್ಟ್. ನಿಮ್ಮ ಮನವಿ ಏನು ಎಂದು ಕೇಳಿದೆ.
ಈ ವೇಳೆ,ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ನ್ಯಾಯಾಂಗ ತನಿಖೆಗೆ ನಾನು ಕೋರುತ್ತಿದ್ದೇನೆ’ ಎಂದು ವಕೀಲರು ಹೇಳಿದರು. ನಂತರ ಪೀಠವು ನವೆಂಬರ್ 14 ರಂದು ಪಿಐಎಲ್ ಅನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದೆ.