ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿರುವುದು ಖುಷಿಯ ವಿಚಾರ. ಆದರೆ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ, ಹಾಗಾಗಿ ನಾನು ಹೋಗುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಶಸ್ತಿ ಪ್ರದಾನ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದಾರೆ. ಆದರೆ ಅಧಿಕೃತವಾಗಿ ನನಗೆ ಆಹ್ವಾನ ನೀಡಿಲ್ಲ. ಸರ್ಕಾರದಿಂದ ಅಧಿಕೃತವಾಗಿ ಆಹ್ವಾನಿಸಬೇಕು. ಆಹ್ವಾನ ನೀಡಿದರೆ ಕಾರ್ಯಕ್ರಮಕ್ಕೆ ಹೋಗೋಣ ಎಂದುಕೊಂಡಿದ್ದೆ. ಆದರೆ ಆಹ್ವಾನ ನೀಡಿಲ್ಲ. ಹಾಗಾಗಿ ಹೋಗುತ್ತಿಲ್ಲ ಎಂದರು.