ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ಈಗಲೂ ಪ್ರಶ್ನೆಯಾಗಿಯೇ ಉಳಿದಿದೆ.
ಈ ಮಧ್ಯೆ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ ಇದೇ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಅವರ ಪುತ್ರ, ಹಾಲಿ ಶಾಸಕ ಡಾ. ಯತೀಂದ್ರ ಅರ್ಜಿ ಸಲ್ಲಿಸಿರುವುದು ಸಾಕಷ್ಟು ಕುತೂಲಹಕ್ಕೆ ಎಡೆಮಾಡಿಕೊಟ್ಟಿದೆ.
ವರುಣ ಹಾಗೂ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ, ಅದರಲ್ಲೂ ವರುಣ ಕ್ಷೇತ್ರದಿಂದ ಸ್ಪರ್ಧಿಸುವುದು ಪಕ್ಕಾ ಎನ್ನಲಾಗುತ್ತಿತ್ತು. ಆದರೆ ಅಂದುಕೊಂಡಂತೆ ಆಗಿಲ್ಲ. ಮಗನನ್ನು ಈ ಕ್ಷೇತ್ರದಲ್ಲಿ ನಿಲ್ಲಿಸಿ, ತಾವು ಮತ್ತೊಂದು ಕ್ಷೇತ್ರದಲ್ಲಿ ನಿಂತು ಎಲ್ಲೆಡೆ ಗೆಲುವು ಸಾಧಿಸುವುದು ಸಿದ್ದರಾಮಯ್ಯ ಲೆಕ್ಕಾಚಾರ ಆಗಿರಬಹುದು.