February 6, 2026
Friday, February 6, 2026
spot_img

ದೆಹಲಿ ವಾಯು ಮಾಲಿನ್ಯದ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಕಿರಣ್ ಬೇಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಈ ಬಗ್ಗೆ ಮಾಜಿ ಐಪಿಎಸ್​​​ ಅಧಿಕಾರಿ ಕಿರಣ್ ಬೇಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರ ರಾಜಧಾನಿಯ ಹಲವಾರು ಪ್ರದೇಶಗಳು ವಾಯು ಗುಣಮಟ್ಟ ಸೂಚ್ಯಂಕ 369 ರಷ್ಟು ದಾಖಲಾಗಿದೆ. ಗಾಳಿ ಮಟ್ಟವು ತುಂಬಾ ಕಳಪೆಯಾಗಿದೆ. ಈ ಕಾರಣದಿಂದ ಇದರ ಪರಿಹಾರಕ್ಕೆ ಕೇಂದ್ರವೇ ಮಧ್ಯಪ್ರವೇಶಿಸಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಕಿರಣ್ ಬೇಡಿ ಅವರು ತಮ್ಮ ಎಕ್ಸ್​​​​ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿಯವರು ತಮ್ಮ ‘ಮನ್ ಕಿ ಬಾತ್’ ಭಾಷಣದಲ್ಲಿ ಈ ವಿಷಯ ಬಗ್ಗೆ ಮಾತನಾಡಬೇಕು. ಇನ್ನು ತಾವು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ಸಮಯದಲ್ಲಿ ಅಧಿಕಾರಿಗಳೊಂದಿಗೆ ಮೋದಿ ಅವರು ಜೂಮ್ ಸೆಷನ್‌ ಮೂಲಕ ನಡೆಸಿದ “ಪರಿಣಾಮಕಾರಿ” ಎಂಬ ಅಭಿಯಾನದ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ಎಕ್ಸ್​​ನಲ್ಲಿ ಕಿರಣ್ ಬೇಡಿ ಹೀಗೆ ಬರೆದುಕೊಂಡಿದ್ದಾರೆ.. ಸರ್, ದಯವಿಟ್ಟು ಮತ್ತೊಮ್ಮೆ ಬೇಡಿಕೊಂಡಿದ್ದಕ್ಕಾಗಿ ನನ್ನನ್ನು ಕ್ಷಮಿಸಿ. ನಾನು ಪುದುಚೇರಿಯಲ್ಲಿದ್ದಾಗ ನೀವು ನಡೆಸಿದ ʼಪರಿಣಾಮಕಾರಿʼ ಎಂಬ ಅಭಿಯಾನ ತುಂಬಾ ಉತ್ತಮವಾಗಿತ್ತು. ಇದರಿಂದ ಆ ರಾಜ್ಯದ ಜನರಿಗೆ ತುಂಬಾ ಒಳ್ಳೆಯದಾಗಿದೆ. ದಯವಿಟ್ಟು ಈಗ ದೆಹಲಿಯ ಮಾಲಿನ್ಯ ವಿಚಾರದಲ್ಲಿ ನೀವು ಮಧ್ಯಪ್ರವೇಶ ಮಾಡಬೇಕು. ದೆಹಲಿಯಲ್ಲಿ ವಾಯು ಮಾಲಿನ್ಯ ತಡೆಯಲು ನೆರೆಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಮುಖ್ಯ ಕಾರ್ಯದರ್ಶಿಗಳೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸಬೇಕು. ಇದು ನಮಗೆ ಭರವಸೆ ನೀಡುತ್ತದೆ. ನಿಮ್ಮ ಮೇಲ್ವಿಚಾರಣೆಯಲ್ಲಿ ನಡೆದರೆ ಖಂಡಿತ ಇದಕ್ಕೆ ಪರಿಹಾರ ಸಿಗುತ್ತದೆ ಎಂದು ಹೇಳಿದ್ದಾರೆ.

ಎಲ್ಲಾ ವಯೋಮಾನದವರಿಗೂ ಅನುಕೂಲವಾಗುವಂತೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಅವರು ಹೇಗೆ ಕೊಡುಗೆ ನೀಡಬಹುದು ಎಂಬುದನ್ನು ಅವರಿಗೆ ಅರ್ಥಮಾಡಿಕೊಳ್ಳಲು ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಬೇಕೆಂದು ಕಿರಣ್ ಬೇಡಿ ಹೇಳಿದ್ದಾರೆ. ಕಳೆದ 10 ವರ್ಷಗಳಿಂದ ಆಗಿರುವ ಹಾನಿಯನ್ನು ಸರಿಪಡಿಸಲು ಇದೊಂದು ಒಳ್ಳೆಯ ಅವಕಾಶ ಏಕೆಂದರೆ ದೆಹಲಿಯಲ್ಲಿ ಡಬಲ್​​ ಇಂಜಿನ್​​​​ ಸರ್ಕಾರ ಇದೆ. ಈ ವಿಚಾರದಲ್ಲಿ ಅಕ್ಕ-ಪಕ್ಕದ ರಾಜ್ಯಗಳು ಹಾಗೂ ಅಧಿಕಾರಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !