ರಾಜ್ಯಸಭಾ ಮಾಜಿ ಸದಸ್ಯ, ಶಿಕ್ಷಣ ತಜ್ಞ ಖ್ಯಾತಿಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭಾ ಮಾಜಿ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ನಿಧನರಾಗಿದ್ದಾರೆ. ಮೂಲತಃ ರಾಯಚೂರಿನವರಾದ ಸಿದ್ದೀಖಿ ಅವರು 1988ರಿಂದ 1994ರವರೆಗೆ ರಾಜ್ಯ ಸಭಾ ಸದಸ್ಯರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೀಖಿ ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯ ಕಾಡತೊಡಗಿದ್ದು, ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ರಾಯಚೂರಿನಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದ ಸಿದ್ದೀಖಿ ಅವರ ನಿಧನಕ್ಕೆ ರಾಜ್ಯವೇ ಮರುಗುತ್ತಿದೆ. ನ್ಯೂ ಎಜುಕೇಷನ್ ಸೊಸೈಟಿ ಹೆಸರಲ್ಲಿ ಸಾಕಷ್ಟು ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು, ಸಫೀಯಾ ಸಂಸ್ಥೆ ಮೂಲಕ ಮಹಿಳೆಯರಿಗೆ ಡಿ.ಎಡ್ ಕಾಲೇಜು ಸ್ಥಾಪಿಸಿದ್ದರು. ರಾಯಚೂರಿನ ಶೇಝಮಿಯಾ ಬಾಬಾ ಖಬರಸ್ಥಾನದಲ್ಲಿ ಸಿದ್ದೀಖಿ ಅವರ ಅಂತ್ಯಕ್ರಿಯೆ ನೆರೆವೇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!