ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವೋಟರ್ ಐಡಿ ಹಗರಣ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಚಿಲುಮೆ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ.ಲೋಕೇಶ್ ಅವರ ಬಂಧನವಾಗಿದೆ.
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೋಕೇಶ್ ನನ್ನು ಇಂದು ಸಂಜೆ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದ್ದು ಎಂದು ದೂರು ದಾಖಲಾಗುತ್ತಿದ್ದಂತೆಯೇ ಲೋಕೇಶ್ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿತ್ತು.