ಹೊಸದಿಗಂತ ವರದಿ, ಕುಶಾಲನಗರ:
ಬೀಡಾಡಿ ದನಕ್ಕೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವಿಗೀಡಾದ ಘಟನೆ ಮಂಗಳವಾರ ಸಂಜೆ ಇಲ್ಲಿಗೆ ಸಮೀಪದ ಬೆಟ್ಟಗೇರಿ ಬಳಿ ನಡೆದಿದೆ.
ಮೃತರನ್ನು ರಂಗಸಮುದ್ರದ ನಿವಾಸಿ ಹರಿ (42) ಎಂದು ಗುರುತಿಸಲಾಗಿದೆ.
ಕುಶಾಲನಗರದ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹರಿ, ಮಂಗಳವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರೆನ್ನಲಾಗಿದ್ದು, ಗುಡ್ಡೆಹೊಸೂರು-ರಂಗಸಮುದ್ರ ಮಾರ್ಗದ ಬೆಟ್ಟಗೇರಿ ಬಳಿ ರಸ್ತೆಗೆ ಅಡ್ಡಲಾಗಿ ಬಂದ ದನಕ್ಕೆ ಅವರು ಚಲಿಸುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ.
ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.