ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ಸಿಎಂ, ರಾಜ್ಯಪಾಲರ ನಡುವಿನ ಶೀತಲ ಸಮರ ಮುಂದುವರಿದಿದ್ದು, ವಿವಿಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಮಾಡಲು ಆರೀಫ್ ಮೊಹಮ್ಮದ್ ಖಾನ್ ನಿರಾಕರಿಸಿದ್ದಾರೆ.
ಸರ್ಕಾರ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಕಾನೂನು ತರುವುದನ್ನು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ಹಿಂದಕ್ಕೆ ಕಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಅಪ್ರಸ್ತುತ ಎಂದು ಹೇಳಿದ್ದಾರೆ.
ಕೇರಳ ವಿಧಾನಸಭೆಯ ಸಭಾಧ್ಯಕ್ಷರು ಮಾತನಾಡಿ, ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿರುವುದು ಅಸ್ವಾಭಾವಿಕವೇನಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.