ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಕೇಂದ್ರಪಾಡ ಜಿಲ್ಲೆಯ ಬಲಿಯಾ ಬಜಾರ್ನಲ್ಲಿ ಕಾರ್ತಿಕೇಶ್ವರ ದೇವರ ಮೂರ್ತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪಟಾಕಿ ಸ್ಫೋಟ ಸಂಭವಿಸಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭೂವನೇಶ್ವರದಿಂದ 80 ಕಿ.ಮೀ ದೂರ ಇರುವ ಬಲಿಯಾ ಬಜಾರ್ನಲ್ಲಿ ದೇವರ ವಿಸರ್ಜನಾ ಸ್ಥಳದಲ್ಲಿ ವಿವಿಧ ಪೂಜಾ ಪೆಂಡಾಲ್ನಲ್ಲಿ ಪಟಾಕಿ ಸಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ವೇಳೆ ಪಟಾಕಿಯ ಕಿಡಿ ಶೇಖರಿಸಿಟ್ಟ ಪಟಾಕಿ ರಾಶಿಯ ಮೇಲೆ ಬಿದ್ದು ಅವಘಡ ಸಂಭವಿಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.