ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಮಂಗಳೂರು ಆಟೋದಲ್ಲಿನ ಕುಕ್ಕರ್ ಬಾಂಬ್ ಸ್ಫೋಟ ಕೇಸ್ ಅನ್ನು ಯುಎಪಿಎ ಕಾಯ್ದೆಯ ಅನ್ವಯ ಎನ್ಐಎ ತನಿಖೆಗೆ ವರ್ಗಾಹಿಸಲು ಆದೇಶಿಸಿದೆ.
ಇಲ್ಲಿಯವರೆಗೂ ನಡೆದಿರುವ ತನಿಖೆಗಳು, ಸಾಕ್ಷಿಯ ಮಾಹಿತಿಗಳನ್ನು ಎನ್ಐಎಗೆ ವಹಿಸಬೇಕು ಎಂದು ರಾಜ್ಯ ಪೊಲೀಸರಿಗೆ ಸೂಚಿಸಲಾಗಿದೆ.