ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಕಾಂತಾರ’ ಸಿನಿಮಾ ಚಿತ್ರಮಂದಿದಿರದಲ್ಲಿ ಯಶಸ್ಸಿ ಕಂಡಿದ್ದು, ಅಮೇಜಾನ್ ಪ್ರೈಂ ವಿಡಿಯೋದಲ್ಲಿ ಈ ಚಿತ್ರ ಪ್ರದರ್ಶನ ಕಾಣುತ್ತಿದೆ.
ಇದರ ನಡುವೆ ಇಷ್ಟು ದಿನ ಪ್ರಚಾರದ ಬ್ಯುಸಿ ಅಲ್ಲಿಂದ ರಿಷಬ್ ಶೆಟ್ಟಿ ಅವರು ಸ್ವಲ್ಪ ಬ್ರೇಕ್ ಪಡೆದುಕೊಂಡಿದ್ದಾರೆ. ಒಂದಷ್ಟು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ.
ಇಂದು ಕಲಬುರಗಿ ನಗರಕ್ಕೆ ತೆರಳಿದ್ದು, ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
‘ಕಾಂತಾರ’ ಸಿನಿಮಾದ ‘ವರಾಹ ರೂಪಂ..’ ಹಾಡಿನ ಮೇಲೆ ಕೃತಿ ಚೌರ್ಯ ಆರೋಪ ವಿದ್ದು, ಕೋರ್ಟ್ನಲ್ಲಿ ಇದರ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ರಿಷಬ್ ಶೆಟ್ಟಿ ‘ಹಾಡಿನ ವಿಚಾರ ಕೋರ್ಟ್ನಲ್ಲಿ ಇದೆ. ಅಲ್ಲಿಂದ ಬಂದಾಗಲೇ ಮಾತನಾಡಬೇಕು. ಅದರ ಬಗ್ಗೆ ನಾವು ಇಲ್ಲಿ ಮಾತನಾಡಬಾರದು’ ಎಂದು ಹೇಳಿದ್ದಾರೆ.
ಇತ್ತ ಒಟಿಟಿಯಲ್ಲಿ ‘ಕಾಂತಾರ’ ಪ್ರಸಾರ ಆಗುತ್ತಿದ್ದು, ಅದರಲ್ಲಿ ‘ವರಾಹ ರೂಪಂ..’ ಹಾಡು ಬದಲಾಗಿರುವುದಕ್ಕೆ ಅನೇಕ ಪ್ರೇಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.
ಚಿತ್ರ 400 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಈ ಯಶಸ್ಸು ಜನರಿಂದ ಬಂದಿದ್ದು ಎಂದು ರಿಷಬ್ ಹೇಳಿದ್ದಾರೆ.
ಹಾಗಾದರೆ ‘ಕಾಂತಾರ 2’ ಸಿನಿಮಾ ಬರುತ್ತಾ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಟೈಮ್ ಬಂದಾಗ ಕಾಂತಾರ 2 ಚಿತ್ರ ಬರುತ್ತದೆ. ಅದರ ಬಗ್ಗೆ ಆಗಲೇ ಹೇಳುತ್ತೇವೆ. ಆ ಕುರಿತು ಈಗ ಯಾವುದೇ ಆಲೋಚನೆ ಇಲ್ಲ’ ಎಂದು ಅವರು ಹೇಳಿದ್ದಾರೆ.