ಹೊಸದಿಗಂತ ಡಿಜಿಟಲ್ ಡೆಸ್ಕ್
ತಮಿಳುನಾಡಿನಲ್ಲಿ ಕ್ರೂರ ಘಟನೆಯೊಂದು ನಡೆದಿದ್ದು, ಕಳ್ಳತನ ಮಾಡಿದ್ದಾನೆ ಎಂದು ಶಂಕಿಸಿ ವ್ಯಕ್ತಿಯೊಬ್ಬನನ್ನುಮರಕ್ಕೆ ಕಟ್ಟಿ ಹಾಕಿ, ಥಳಿಸಿ ಕೊಂದಿದ್ದಾರೆ.
ಮೃತನನ್ನು ತುವಕುಡಿಯ ಚಕ್ರವರ್ತಿ ಎಂದು ಗುರುತಿಸಲಾಗಿದೆ
ತಿರುಚ್ಚಿ-ಮದುರೈ ಹೆದ್ದಾರಿಯ ಮಣಿಗಂಡಂನಲ್ಲಿ ಘಟನೆ ನಡೆದಿದೆ. ಪೀಠೋಪಕರಣ ಹಾಗೂ ಗೃಹೋಪಯೋಗಿ ವಸ್ತುಗಳನ್ನು ತಯಾರಿಸುವ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದ ವಿವಿಧ ರಾಜ್ಯಗಳ ಕಾರ್ಮಿಕರು ಈ ಕೃತ್ಯವನ್ನು ನಡೆಸಿದ್ದಾರೆ.
ವ್ಯಕ್ತಿಯೊಬ್ಬ ಮಿಲ್ನೊಳಗೆನುಗ್ಗುವುದನ್ನು ನೋಡಿದ ಕಾರ್ಮಿಕರು ಆತನನ್ನು ಹಿಡಿದು, ಕಳ್ಳತನದ ಆರೋಪವನ್ನು ಮಾಡಿದ್ದಾರೆ. ಬಳಿಕ ಆತನನ್ನು ಮರಕ್ಕೆ ಕಟ್ಟಿ ಹಾಕಿ, ಹಲ್ಲೆ ನಡೆಸಿದ್ದಾರೆ. ಆತನ ಕುತ್ತಿಗೆ, ಎದೆ, ಬಲಗೈ, ಬಲ ಮೊಣಕಾಲು ಹಾಗೂ ಗುಪ್ತಾಂಗದ ಮೇಲೂ ಗಾಯಗಳಾಗಿರುವುದು ಕಂಡುಬಂದಿದೆ.
ಕಾರ್ಮಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕಾಗಮಿಸುವಷ್ಟರಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಪೊಲೀಸರು ಮಿಲ್ ಮಾಲೀಕ ಧೀರೇಂದರ್ ಸೇರಿದಂತೆ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಫೈಝಲ್ ಶೇಕ್ ಹಾಗೂ ಮಫ್ಜುಲ್ ಹುಕ್ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.