ಮೆಟ್ರೋ ನಿಲ್ದಾಣದ ಹೆಸರು ಬದಲಾವಣೆಗೆ ಪಿಐಎಲ್: ಯಾವ ಉದ್ದೇಶಕ್ಕೆ ಅರ್ಜಿ ಸಲ್ಲಿಸಿರುವಿರಿ ಎಂದು ಪ್ರಶ್ನಿಸಿದ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮುಂಬೈನ ಪಶ್ಚಿಮ ಉಪನಗರದಲ್ಲಿರುವ ಮೆಟ್ರೋ ರೈಲು ನಿಲ್ದಾಣದ ಹೆಸರನ್ನು ‘ಪಠಾಣ್‌ವಾಡಿ’ಯಿಂದ ದಿಂಡೋಶಿ ಎಂದು ಬದಲಾಯಿಸುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮುಂಬೈ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಅಭಯ್ ಅಹುಜಾ ಅವರ ಪೀಠವು,ನೀವು ಯಾವ ಸಾರ್ವಜನಿಕ ಹಿತಾಸಕ್ತಿಗಳನ್ನು ಪೂರೈಸಲು ಹೊರಟಿದ್ದೀರಿ ಎಂದು ಪ್ರಶ್ನಿಸಿದರು.

ಸಮಿತಿಯ ವರದಿಯನ್ನು (ಎಂಎಂಆರ್‌ಡಿಎ) ಕೋರ್ಟ್​ನಲ್ಲಿ ಪ್ರಶ್ನಿಸಬಹುದೆ? ರೈಲ್ವೇ ನಿಲ್ದಾಣಕ್ಕೆ ಹೆಸರು ಬದಲಾಯಿಸುವಂತೆ ಕೋರಿರುವುದು ಸಾರ್ವಜನಿಕ ಹಿತಾಸಕ್ತಿ ಆಗುತ್ತದೆಯೇ. ನೀವು ಯಾವ ಉದ್ದೇಶಕ್ಕೆ ಇಂಥದ್ದೊಂದು ಅರ್ಜಿಯನ್ನು ಸಲ್ಲಿಸಿರುವಿರಿ ಎಂದು ಪ್ರಶ್ನಿಸಿದೆ.

ಈ ಬಗ್ಗೆ ಸೂಕ್ತ ಉತ್ತರ ಕೊಡಲು ವಕೀಲರು ಎಡವಿದ್ದು, ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಡಿಸೆಂಬರ್ 8ಕ್ಕೆ ಮುಂದೂಡಿದ್ದು, ಈ ಪ್ರಶ್ನೆಗೆ ಉತ್ತರಿಸುವಂತೆ ತಿಳಿಸಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರರ ಪ್ರಕಾರ, ಮೆಟ್ರೋ ನಿಲ್ದಾಣಗಳಿಗೆ ಹೆಸರಿಸುವುದಕ್ಕೆ ಸಂಬಂಧಿಸಿದಂತೆ ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಎಂಎಂಆರ್‌ಡಿಎ) ರೂಪಿಸಿದ ನೀತಿಯನ್ನು ನಿಲ್ದಾಣಕ್ಕೆ ನಿಯೋಜಿಸಿದ ಹೆಸರು ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಹೇಳಿದೆ. .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!