ಹೊಸ ದಿಗಂತ ವರದಿ, ಬೀದರ:
ತಾಯಿ ಭಾರತ ಮಾತೆಗೆ ಸೇವೆ ಮಾಡಲು ತಮ್ಮ ಉತ್ಸಾಹ ಕಂಡು ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಕೇಂದ್ರ ಸಚಿವರಾದ ಭಗವಂತ ಖೂಬಾ ಹೇಳಿದರು.
ಅವರು ಶನಿವಾರ ಅಗ್ನಿವೀರ ಯೋಜನೆಯಡಿ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತೀಯ ಸೇನಾ ನೇಮಕಾತಿ rallyಯಲ್ಲಿ ಭಾಗವಹಿಸಿ ಮಾತನಾಡಿದರು.
ಭಾರತ ಸರ್ಕಾರದ ರಕ್ಷಣಾ ಇಲಾಖೆ ಅಗ್ನಿವೀರ ಯೋಜನೆಯಡಿ ಈ ಸೇನಾ ನೇಮಕಾತಿ rally ನಮ್ಮ ಭಾಗದಲ್ಲಿ ನಡೆಸುತ್ತಿದೆ ಇದರಲ್ಲಿ 70 ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯವಾಗಿದೆ, ಕಳೆದ ಒಂದು ವಾರದಿಂದ ಈ rally ಬೀದರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಎಂದರು.
ಭಾರತೀಯ ಸೇನೆಯ ನಿಯಮದಂತೆ ಆಯ್ಕೆ ನಡೆಯುತ್ತಿದೆ ಯುವಕರು ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಇದರಲ್ಲಿ ತೋರಿಸಿ ಆಯ್ಕೆಯಾಗಬೇಕು. ತಾವು ಯಾವತ್ತಿಗೂ ಎದೆಗುಂದದೆ ಆತ್ಮವಿಶ್ವಾಸದಿಂದ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಯಶಸ್ವಿಯಾಗಬೇಕು ಮತ್ತು ತಮಗೆಲ್ಲರಿಗೂ ಒಳ್ಳೆಯದಾಗಲಿ ಎಂದು rallyಯಲ್ಲಿ ಭಾಗವಹಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಶುಭ ಹಾರೈಸಿದರು.
ಬ್ರಿಗೇಡಿಯರ್ ಎ.ಎಸ್. ವಾಲಿಂಬೆ, ಡಿಡಿಜಿ. ರಿಕ್ರ್ಯೂಟಿಂಗ್.ಜಡ್.ಆರ್.ಓ ಬೆಂಗಳೂರು ಇವರು ಕೇಂದ್ರ ಸಚಿವರಾದ ಭಗವಂತ ಖೂಬಾ ಅವರಿಗೆ ಸೇನಾ ನೇಮಕಾತಿ ಕುರಿತು ಮಾಹಿತಿ ನೀಡಿದರು. ಸಚಿವರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿವಿಧ ಹಂತಗಳ ಆಯ್ಕೆಯ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಕರ್ನಲ್ ನಿಶಾಂತ ಡಿ.ಐ.ಆರ್. ಆರ್.ಟಿ.ಜಿ ಬೆಳಗಾವಿ, ಕರ್ನಲ್ ರವಿಕಾಂತ ಕಮಾಂಡಿಂಗ್ ಆಫೀಸರ್ 16 ಬಿಹಾರ, ಬೀದರ ತಹಶಿಲ್ದಾರ ಅಣ್ಣಾರಾವ್ ಪಾಟೀಲ್, ಮುಖ್ಯ ಪಶು ವೈದ್ಯಾಧಿಕಾರಿ ಗೌತಮ ಅರಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.