ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಕಾರೊಂದು ಸೇತುವೆಯಿಂದ ಹಾರಿ ಕೆಳಗೆ ಬಿದ್ದಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಕಾರು ಚಲಿಸುತ್ತಿತ್ತು ಚಾಲಕ ಸೇರಿ ಐವರು ಪ್ರಯಾಣಿಸುತ್ತಿದ್ದಾರೆ.
ಇವರು ಸ್ನೇಹಿತನ ಮದುವೆಗೆಂದು ಸಿಂಧನೂರಿಗೆ ಹೋಗಿ ವಾಪಸಾಗುವಾಗ ಘಟನೆ ನಡೆದಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸದ್ಯಕ್ಕೆ ವಾಹನದಲ್ಲಿದ್ದವರೆಲ್ಲರೂ ಬೆಂಗಳೂರು ನಿವಾಸಿಗಳು ಎಂದು ತಿಳಿದುಬಂದಿದೆ.