ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಸಹಾಯಕ ಸಬ್ ಇನ್ಸ್ಪೆಕ್ಟರ್ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಇಂದು ಸಂಜೆ ಮೈಸೂರಿನ ಜಲಪುರಿ ಪೊಲೀಸ್ ವಸತಿಗೃಹದ ಸಿ ಬ್ಲಾಕ್ನಲ್ಲಿ ಗಿರಿಜಾಲಕ್ಷ್ಮೀ(19) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೈಸೂರು ನಗರದ ಖಾಸಗಿ ಕಾಲೇಜಿನ ಪ್ರಥಮ ಬಿಕಾಂ ವ್ಯಾಸಾಂಗ ಮಾಡುತ್ತಿದ್ದಳು. ಆದ್ರೆ,ಗಿರಿಜಾಲಕ್ಷ್ಮೀ ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ.
ಗಿರಿಜಾಲಕ್ಷ್ಮೀ ತಂದೆ ಮೈಸೂರು ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತ್ಯವ ನಿರ್ವಹಿಸುತ್ತಿದ್ದಾರೆ.
ಇನ್ನು ಈ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.