ಹೊಸದಿಗಂತ ವರದಿ,ವಿಜಯಪುರ:
ಐತಿಹಾಸಿಕ ಸ್ಮಾರಕ ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಗೋಳಗುಮ್ಮಟ ಆವರಣದಲ್ಲಿ ಬುಧವಾರ ಸಂಜೆ ನಡೆದಿದೆ.
ಸೌಂದರ್ಯ ಬೆಂಗಳೂರು (19) ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಗೋಳಗುಮ್ಮಟದ ಮೇಲೆ ಏರಿದ ಯುವತಿ, ಮೇಲಿಂದ ಜಿಗಿದು ಅಸುನೀಗಿದ್ದಾಳೆ.
ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.