February 6, 2026
Friday, February 6, 2026
spot_img

ಬಾಬರಿ ಮರುನಿರ್ಮಾಣಕ್ಕೆ ನೆಹರು ನಿಧಿ ಕೋರಿದ್ದರು: ಇತಿಹಾಸದ ಹೊಸ ಅಧ್ಯಾಯ ಬಿಚ್ಚಿಟ್ಟ ರಾಜನಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಗುಜರಾತಿನಲ್ಲಿ ನೀಡಿರುವ ಹೇಳಿಕೆಯೊಂದು ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ‘ಏಕತಾ ಮೆರವಣಿಗೆ’ಯಲ್ಲಿ ಮಾತನಾಡಿದ ಸಿಂಗ್, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಬಾಬರಿ ಮಸೀದಿಯ ಮರುನಿರ್ಮಾಣಕ್ಕಾಗಿ ಸಾರ್ವಜನಿಕ ನಿಧಿಯನ್ನು ಕೋರಿದ್ದರು ಎಂದು ಪ್ರತಿಪಾದಿಸಿದರು.

ಆದರೆ, ಈ ಪ್ರಸ್ತಾವನೆಗೆ ನೆಹರು ಅವರ ಸಂಪುಟದ ಸಹೋದ್ಯೋಗಿಯಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಬಲವಾಗಿ ವಿರೋಧ ವ್ಯಕ್ತಪಡಿಸಿದ್ದರು ಮತ್ತು ಈ ಯೋಜನೆಯನ್ನು ಮುಂದುವರಿಸದಂತೆ ತಡೆದಿದ್ದರು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಈ ಹೇಳಿಕೆಯು ಐತಿಹಾಸಿಕ ವಿವಾದಕ್ಕೆ ಹೊಸ ಆಯಾಮವನ್ನು ನೀಡಿದ್ದು, ನೆಹರು ಮತ್ತು ಪಟೇಲ್ ನಡುವಿನ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಕುರಿತು ಮತ್ತೊಮ್ಮೆ ಚರ್ಚೆ ಹುಟ್ಟುಹಾಕಿದೆ. ಕೇಂದ್ರ ಸಚಿವರ ಈ ಹೇಳಿಕೆಗೆ ರಾಜಕೀಯ ವಲಯಗಳಲ್ಲಿ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !