ಕಾಲೇಜು ಬಳಿ ಗಾಂಜಾ ಮಾರಾಟ: ಆರೋಪಿ ಸೆರೆ

ಹೊಸದಿಗಂತ ವರದಿ, ಮಡಿಕೇರಿ:
ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಮೈಸೂರಿನ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಲತಃ ವೀರಾಜಪೇಟೆ ಸುಣ್ಣದ ಬೀದಿ ನಿವಾಸಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ನೆಲೆಸಿರುವ ಹಸೈನಾರ್ ಎಂದು ಗುರುತಿಸಲಾಗಿದೆ.
ಈತ ಗೋಣಿಕೊಪ್ಪ ಕಾವೇರಿ ಕಾಲೇಜು ಹಾಸ್ಟೆಲ್ ಬಳಿ ‌ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಗೋಣಿಕೊಪ್ಪ ಪೊಲೀಸ್ ಠಾಣಾ ಪಿ.ಎಸ್.ಐ ದೀಕ್ಷಿತ್ ಕುಮಾರ್ ಮತ್ತು ಸಿಬ್ಬಂದಿಗಳು 650 ಗ್ರಾಂ ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.
ಗೋಣಿಕೊಪ್ಪ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಯಾವುದೇ ಭಯವಿಲ್ಲದೆ ಮಾಹಿತಿ ನೀಡಿ ಅವುಗಳನ್ನು ತಡೆಗಟ್ಟಲು ಸಹಕರಿಸಬೇಕೆಂದು ಮನವಿ ಮಾಡಿರುವ ದೀಕ್ಷಿತ್ ಕುಮಾರ್ ಅವರು, ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!