ಆಂಧ್ರ ಮಾಜಿ ಸಿಎಂ ಸಭೆಯಲ್ಲಿ ಭಾರೀ ಅವಘಡ: ಕಾಲ್ತುಳಿತಕ್ಕೆ ಸಿಕ್ಕಿ ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ನಡೆದ ಟಿಡಿಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಭಾರೀ ಅವಘಡ ಸಂಭವಿಸಿದ್ದು, ಕಾಲ್ತುಳಿತಕ್ಕೆ ಸಿಲುಕಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಬುಧವಾರ ರಾತ್ರಿ ನಡೆದಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕಂದುಕೊರ್ ನಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಗೆ ನಾಯ್ಡು ಆಗಮಿಸುತ್ತಿದ್ದಂತೆ ಈ ದುರ್ಘಟನೆ ನಡೆದಿದೆ.

ಮಾಹಿತಿಗಳ ಪ್ರಕಾರ ಸಾವಿರಾರು ಮಂದಿ ಸೇರಿದ್ದ ಈ ಬೃಹತ್ ಸಮಾವೇಶದಲ್ಲಿ ಏಕಾಏಕಿ ಟಿಡಿಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ನಡುವೆ ತಳ್ಳಾಟ ಮತ್ತು ನೂಕಾಟ ನಡೆದಿದೆ. ಈ ಸಂದರ್ಭ ಕೆಲವರು ಹತ್ತಿರದ ಒಳಚರಂಡಿ ಕಾಲುವೆಗೆ ಜಿಗಿದು ಕಾಲ್ತುಳಿತದಿಂದ ತಪ್ಪಿಸಿಕೊಂಡರೆ, ಇನ್ನು ಕೆಲವರು ಜನರ ಗುಂಪಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ಘಟನೆ ನಡೆಯುತ್ತಿದ್ದಂತೆಯೇ ಕಾರ್ಯಕ್ರಮವನ್ನು ರದ್ದುಗೊಳಿಸಿದ ನಾಯ್ಡು, ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!