ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್ ಸಮೀಪದ ಸೋಮಿನಕಾಡಿನಲ್ಲಿ ಕಾಳ್ಗಿಚ್ಚು ಎದ್ದಿದ್ದು, 60ಎಕರೆಗೂ ಹೆಚ್ಚು ಅರಣ್ಯ ಬೆಂಕಿಗಾಹುತಿಯಾಗಿದೆ. ಬೆಂಕಿ ಗಮನಿಸಿದ ಅರಣ್ಯ ಸಿಬ್ಬಂದಿ ತಕ್ಷಣವೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಳೆಗಾಲದ ನಂತರ ಕಾಳ್ಗಿಚ್ಚಿನ ಭೀತಿ ಎದುರಿಸಬೇಕಾಗುತ್ತದೆ. ಒಟ್ಟಾರೆ 6೦ ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಸರಿಸೃಪಗಳು, ಕೀಟಗಳು ಹಾಗೂ ಪಕ್ಷಿಗಳು ಮೃತಪಟ್ಟಿವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.