ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿತ್ವಾ ಚಂಡಮಾರುತದಿಂದ ವಾಯುಭಾರ ಕುಸಿತಕ್ಕೆ ಕಾರಣವಾಗಿದೆ, ಬೆಂಗಳೂರು ಮತ್ತು ಕರ್ನಾಟಕದ ಹಲವಾರು ಕರಾವಳಿ ಜಿಲ್ಲೆಗಳು ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬುಧವಾರದಂದು (ಡಿ.3) ಬೆಂಗಳೂರಿನ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ನೀಡಿದೆ.
ಇನ್ನು ಜಿಲ್ಲೆಯ ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26°C ಮತ್ತು ಕನಿಷ್ಠ ತಾಪಮಾನ 18°C ಇರುವ ಸಾಧ್ಯತೆಯಿದೆ. ಡಿಸೆಂಬರ್ 05 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ (ಚಾಮರಾಜನಗರ, ಮೈಸೂರು, ಕೊಡಗು) ಪ್ರತ್ಯೇಕ ಸ್ಥಳಗಳಲ್ಲಿ ಸಾಧರಣ ಮಳೆಯಾಗಲಿದೆ ಎಂದು ಹೇಳಿದೆ.
ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ. ಡಿಸೆಂಬರ್ 6, 8 ರಂದು ರಾಜ್ಯದಾದ್ಯಂತ (ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು) ಒಣ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಬಳ್ಳಾರಿ, ದಾವಣಗೆರ, ಶಿವಮೊಗ್, ಉಡುಪ, ಚಿಕ್ಕಮಗಳೂರ, ದಕ್ಷಿಣ ಕನ್ನ, ಕೊಡಗು, ಮೈಸೂರ, ಚಾಮರಾಜನಗ, ರಾಮನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಮಾಡಲಾಗಿದೆ.

