ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಹನುಮಾನ್ಗಢ್ನ ಪಲ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಕಾರು ಅಪಘಾತಕ್ಕೀಡಾಗಿ ಒಟ್ಟು ಐವರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ರಾವತ್ಸರ್-ಸರ್ದರ್ಶಹರ್ ಮೇಘಾ ಹೆದ್ದಾರಿಯಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದ ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತದ್ದು, ಅದರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಆರನೇ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರಿಂದ ಬಿಕಾನೆರ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ರಾಜಸ್ಥಾನದ ಹನುಮಾನ್ಗಢದ ಬಿಸ್ರಾಸರ್ ಗ್ರಾಮದ ರಾಜು (24), ನರೇಶ್ ಕುಮಾರ್ (28), ದನರಾಮ್ (32), ಬಬ್ಲು (28), ಮತ್ತು ಮುರಳಿ (28) ಎಂದು ಪೊಲೀಸರು ಗುರುತಿಸಿದ್ದಾರೆ. ಏತನ್ಮಧ್ಯೆ, ಗಾಯಗೊಂಡ ವ್ಯಕ್ತಿಯನ್ನು ಬಿಸರಸರ ಅಶೋಕ್ ಕುಮಾರ್ (30) ಎಂದು ಗುರುತಿಸಲಾಗಿದೆ.
ಅಪಘಾತದ ಪರಿಣಾಮ ಕಾರು ಛಿದ್ರಗೊಂಡಿದ್ದು, ಮೃತದೇಹಗಳನ್ನು ಪಳ್ಳು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ವಿಚಾರ ಸಂಬಂಧ ತನಿಖೆ ನಡೆಯುತ್ತಿದೆ.