‘ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡಿ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಿ ಎಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರ ಬರೆದಿದ್ದು, ಒಡೆಯರ್ ಹೆಸರಿಡುವಂತೆ ಮನವಿ ಮಾಡಿದ್ದಾರೆ.

ಇದೇ ಹೆದ್ದಾರಿಗೆ ಸಂಸದ ಪ್ರತಾಪ್ ಸಿಂಹ ಕಾವೇರಿ ನದಿಯ ಹೆಸರು ಇಡಲು ಮನವಿ ಮಾಡಿದ್ದರು. ಉತ್ತರ ಪ್ರದೇಶದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇ, ಯಮುನಾ ಎಕ್ಸ್‌ಪ್ರೆಸ್‌ವೇ ರೀತಿ ಕಾವೇರಿ ಎಕ್ಸ್‌ಪ್ರೆಸ್ ವೇ ಹೆಸರು ಇಡಬೇಕು ಎಂದು ಮನವಿ ಮಾಡಿದ್ದರು.

10 ಲೇನ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಭಾರತಮಾಲಾ ಪರಿಯೋಜನಾ ಹಂತ- ಎಲ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಮೈಸೂರು-ಬೆಂಗಳೂರನ್ನು ಕೇವಲ 90 ನಿಮಿಷಗಳಲ್ಲಿ ಕ್ರಮಿಸಲು ಇದರಿಂದ ಸಾಧ್ಯವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!