ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಮತ್ತೆ ಬೀದಿ ನಾಯಿಗಳ ಕಾಟ ಮುಂದುವರಿದಿದೆ. ಬೀದಿ ನಾಯಿಗಳ ದಾಳಿಯಿಂದಾಗಿ ಅಯ್ಯಪ್ಪ ಸ್ವಾಮಿ ಭಕ್ತರು ಸೇರಿ ಒಟ್ಟು ಏಳು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊಲ್ಲಂ ಜಿಲ್ಲೆಯ ಕುಳುತುಪುಳ ನಗರದ ಶ್ರೀ ಧರ್ಮ ಶಾಸ್ತಾ ದೇಗುಲದ ಬಳಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಗಾಯಾಳುಗಳಲ್ಲಿ 12 ವರ್ಷದ ಹೆಣ್ಣು ಮಗುವೂ ಸೇರಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ದೇಗುಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ನಾಯಿಗಳು ಅಲ್ಲಿದ್ದ ಜನರ ಮೇಲೆ ದಾಳಿ ನಡೆಸಿದೆ.
ಗಾಯಾಳುಗಳನ್ನು ಕುಳುತುಪುಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಾಳುಗಳಾಗಿರುವ ಇಬ್ಬರನ್ನು ಪುನಲೂರಿನ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.