ಹೊಸದಿಗಂತ ಡಿಜಿಟಲ್ ಡೆಸ್ಕ್:
ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ವೇಳೆ ಎಲ್ಲಾ ಭಕ್ತರು ಶಾಂತಿಯಿಂದ ಸಹಕರಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಶ್ರೀಗಳ ಅಂತಿಮ ದರ್ಶನಕ್ಕೆ ಎಲ್ಲ ರೀತಿಯ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ದೊಡ್ಡ ಪ್ರಮಾಣದಲ್ಲಿ ಭಕ್ತರ ಜನಸಾಗರ ಹರಿದುಬರುತ್ತಿದೆ. ಇದರಿಂದಲೇ ತಿಳಿಯುತ್ತದೆ ಶ್ರೀಗಳು ಎಷ್ಟು ಪ್ರೀತಿ ಹಾಗೂ ವಿಶ್ವಾಸವನ್ನು ಬಿಟ್ಟುಹೋಗಿದ್ದಾರೆ ಎಂದು ಹೇಳಿದರು.
ದರ್ಶನಕ್ಕೆ ಬಂದ ಭಕ್ತರಿಗಾಗಿ ಪ್ರಸಾದ, ನೀರಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ವಿಜಯಪುರದ ಜನತೆಗೂ ನಮ್ಮ ಧನ್ಯವಾದ. ಎಲ್ಲವೂ ವ್ಯವಸ್ಥಿತವಾಗಿ ಜರುಗಲಿ ಎಂದು ಹೇಳಿದ್ದಾರೆ.