ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಜನಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ J.P.ನಡ್ಡಾ ಭಾಗವಹಿಸಿದರು.
ಈ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ನವರು ಒಬ್ಬ ಮುಖ್ಯಮಂತ್ರಿಗೆ ನಾಯಿ ಎಂದು ಕರೆದು ಕರ್ನಾಟಕದ ಜನರಿಗೆ ಅಪಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಯುಪಿಎ ಸರ್ಕಾರವಿದ್ದಾಗ ಕರ್ನಾಟಕವನ್ನು ಅಭಿವೃದ್ಧಿಪಡಿಸಿರಲಿಲ್ಲ. ಎನ್ಡಿಎ ಸರ್ಕಾರ ಬಂದ ಬಳಿಕ ರಾಜ್ಯ ಸಾಕಷ್ಟು ಅಭಿವೃದ್ಧಿ ಆಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸೇರಿ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ.ಬಿಜೆಪಿ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಮಾಡುತ್ತಿದೆ. ಕರ್ನಾಟಕದಲ್ಲೂ ಎಲ್ಲಾ ವರ್ಗದ ಜನರ ಹಿತ ಚಿಂತನೆ ಮಾಡುವ ಸರ್ಕಾರವಿದೆ ಎಂದು ಹೇಳಿದರು.
ಕೊರೋನಾ, ನೆರೆ ಹಾವಳಿ ಸಂಕಷ್ಟದಲ್ಲೂ ಆರ್ಥಿಕತೆ ಬೆಳೆದಿದೆ. 80 ಕೋಟಿ ಜನರಿಗೆ ಉಚಿತ ರೇಷನ್ ಕೊಟ್ಟಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂದಿದೆ. 30 ಸಾವಿರ ಕೋಟಿ ರೂ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ ಎಂದರು.