ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ನಕ್ಸಲ್ಬಾರಿಯ ರಥಖೋಲಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಭಾನುವಾರ ರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯ ಹಿಂದಿನ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ.
ಅಧಿಕಾರಿಗಳ ಪ್ರಕಾರ, ಕಾರ್ಖಾನೆಯ ಕಾರ್ಮಿಕರು ಬೆಂಕಿಯನ್ನು ಗಮನಿಸಿ ನಂದಿಸಲು ಪ್ರಯತ್ನಿಸಿದರು. ಅವರ ಪ್ರಯತ್ನ ವಿಫಲವಾದಾಗ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಮಾಹಿತಿ ಪಡೆದ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿ ಸುಮಾರು ಗಂಟೆಗಳ ಬಳಿಕ ಬೆಂಕಿಯನ್ನು ಹತೋಟಿಗೆ ತಂದರು.
ಶೀಘ್ರದಲ್ಲೇ ಅಗ್ನಿ ಅನಾಹುತಕ್ಕೆ ಕಾರಣವನ್ನು ತಿಳಿಯುವುದಾಗಿ ಅಗ್ನಿಶಾಮಕ ಅಧಿಕಾರಿ ಅಜಿತ್ ಘೋಷ್ ಹೇಳಿದ್ದಾರೆ. ಅವಘಡದಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ. ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದರು.