Friday, December 5, 2025

RBI | ಜ. 1ರಿಂದ ಬ್ಯಾಂಕ್ ಗ್ರಾಹಕರ ದೂರುಗಳ ಶೀಘ್ರ ವಿಲೇವಾರಿಗೆ ಎರಡು ತಿಂಗಳ ಅಭಿಯಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆರ್​ಬಿಐ ಈಗ ಗ್ರಾಹಕರ ಸೇವೆಗೆ ಅತಿಹೆಚ್ಚು ಅದ್ಯತೆ ಕೊಡಲು ನಿರ್ಧರಿಸಿದೆ. ಆರ್​ಬಿಐ ಒಂಬುಡ್ಸ್​ಮೆನ್ ಬಳಿ ಒಂದು ತಿಂಗಳಿಗಿಂತ ಹೆಚ್ಚು ಕಾಲದಿಂದ ಬಾಕಿ ಉಳಿದಿರುವ ಎಲ್ಲಾ ದೂರುಗಳನ್ನು ಶೀಘ್ರ ಇತ್ಯರ್ಥ ಪಡಿಸಲು ಎರಡು ತಿಂಗಳ ಅಭಿಯಾನ ಕೈಗೊಳ್ಳಲಿದೆ.

2026ರ ಜನವರಿಯಿಂದ ಫೆಬ್ರುವರಿವರೆಗೆ ಎರಡು ತಿಂಗಳ ಕಾಲ ಈ ಅಭಿಯಾನ ಇರಲಿದೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಂಪಿಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ನಾವು ಗ್ರಾಹಕ ಸೇವೆಗಳನ್ನು ಸುಧಾರಿಸಲು ಗಮನ ಹರಿಸಿದ್ದೇವೆ. ಈ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಮರು ಕೆವೈಸಿ, ಹಣಕಾಸು ಒಳಗೊಳ್ಳುವಿಕೆ ಮತ್ತು ನಿಮ್ಮ ಹಣ ನಿಮ್ಮ ಅಧಿಕಾರ ಅಭಿಯಾನಗಳು ಇಂಥ ಕೆಲ ಕ್ರಮಗಳಾಗಿವೆ. ಈ ವರ್ಷದ ಆರಂಭದಲ್ಲಿ ನಮ್ಮ ಸಿಟಿಜನ್ ಚಾರ್ಟರ್ ಅನ್ನೂ ಪರಾಮರ್ಶಿಸಿದ್ದೇವೆ.

ನಮ್ಮ ಎಲ್ಲಾ ಸೇವೆಗಳಿಗೆ ಅರ್ಜಿಗಳನ್ನು ಆನ್​ಲೈನ್​ನಲ್ಲೇ ನೀಡಿದ್ದೇವೆ. ಸಮಸ್ಯೆ ಇತ್ಯರ್ಥಪಡಿಸಲಾಗಿರುವುದರ ವಿವರವನ್ನು ಪ್ರತೀ ತಿಂಗಳು ನೀಡುತ್ತಿದ್ದೇವೆ. ಬಾಕಿ ಉಳಿದಿರುವ ಅರ್ಜಿಗಳನ್ನು ಪ್ರತೀ ತಿಂಗಳ ಮೊದಲ ತಾರೀಖಿನಿಂದು ಪ್ರಕಟಿಸುತ್ತಿದ್ದೇವೆ’ ಎಂದು ಸಂಜಯ್ ಮಲ್ಹೋತ್ರಾ ಅವರು ಆರ್​ಬಿಐನಿಂದ ತೆಗೆದುಕೊಳ್ಳಲಾಗಿರುವ ಗ್ರಾಹಕ ಕೇಂದ್ರಿತ ಕ್ರಮಗಳ ವಿವರ ನೀಡಿದ್ದಾರೆ

ಆರ್​ಬಿಐ ನಿಯಂತ್ರಿತವಾಗಿರುವ ಎಲ್ಲಾ ಹಣಕಾಸು ಸಂಸ್ಥೆಗಳೂ ಕೂಡ ತಮ್ಮ ನೀತಿ ಮತ್ತು ಕಾರ್ಯಾಚರಣೆಗಳಲ್ಲಿ ಗ್ರಾಹಕರಿಗೆ ಆದ್ಯತೆ ಕೊಡಬೇಕು. ಗ್ರಾಹಕ ಸೇವೆ ಸುಧಾರಿಸಬೇಕು ಮತ್ತು ಸಮಸ್ಯೆಗಳನ್ನು ಕಡಿಮೆಗೊಳಿಸಬೇಕು. ಮುಂದಿನ ವರ್ಷದ ಜನವರಿ 1ರಿಂದ ಎರಡು ತಿಂಗಳ ಅಭಿಯಾನ ನಡೆಸಲು ಉದ್ದೇಶಿಸಿದ್ದೇವೆ. ಆರ್​ಬಿಐ ಒಂಬುಡ್ಸ್​ಮೆನ್ (ಸಾರ್ವಜನಿಕ ತನಿಖಾಧಿಕಾರಿ) ಬಳಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ಬಾಕಿ ಇರುವ ದೂರುಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಎಲ್ಲಾ ಸಂಸ್ಥೆಗಳೂ ಸಹಕರಿಸಬೇಕು ಎಂದು ನಿರೀಕ್ಷಿಸುತ್ತೇನೆ’ ಎಂದು ಆರ್​ಬಿಐ ಗವರ್ನರ್ ಹೇಳಿದ್ದಾರೆ.

error: Content is protected !!