ಹೊಸದಿಗಂತ ವರದಿ ಕಲಬುರಗಿ:
ವಿಜಯಪುರದಲ್ಲಿ ನಡೆಯಲಿರುವ ವಿಜಯ್ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು, ವಿಶೇಷ ವಿಮಾನದ ಮೂಲಕ ಶನಿವಾರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸಿದರು. ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜೆ.ಪಿ.ನಡ್ಡಾ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಅಶ್ವಥ್ ನಾರಾಯಣ, ಸೇರಿದಂತೆ ಸ್ಥಳೀಯ ನಾಯಕರು ಬರಮಾಡಿಕೊಂಡರು.
ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ,ಸಿಂದಗಿಯಲ್ಲಿ ನಡೆಯಲಿರುವ ಪಕ್ಷದ ಕಾಯ೯ಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ದತ್ತಾತ್ರೇಯ ಪಾಟೀಲ್, ಬಸವರಾಜ ಮತ್ತಿಮಡು, ಅವಿನಾಶ್ ಜಾಧವ್, ಸುಭಾಷ್ ಗುತ್ತೇದಾರ, ಜಿಲ್ಲಾ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್ ಸೇರಿದಂತೆ ಹಲವು.ಮುಖಂಡರು ಇದ್ದರು.