ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಹಿಂದೆ “ಶಾರುಖ್ ಖಾನ್ ಯಾರು? ಅವರ ಬಗ್ಗೆ ಅಥವಾ ಅವರ ಪಠಾನ್ ಚಿತ್ರದ ಬಗ್ಗೆ ನನಗೆ ಏನೂ ತಿಳಿದಿಲ್ಲ”, ಎಂದು ಹೇಳಿದ್ದ ಅವರು ತಡರಾತ್ರಿ ಶಾರುಖ್ ಭದ್ರತೆ ನೀಡುವಂತೆ ಮನವಿ ಮಾಡಿದ ಕೂಡಲೇ ಯೂ ಟರ್ನ್ ಹೊಡೆದಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದೀಗ ಸಂಪೂರ್ಣ ಭದ್ರತೆ ಒದಗಿಸುವುದಾಗಿ ತಿಳಿಸಿದರು.
“ಬಾಲಿವುಡ್ ನಟ ಶ್ರೀ @iamsrk ನನಗೆ ಕರೆ ಮಾಡಿದರು ಮತ್ತು ನಾವು ಇಂದು ಬೆಳಿಗ್ಗೆ 2 ಗಂಟೆಗೆ ಮಾತನಾಡಿದ್ದೇವೆ. ತಮ್ಮ ಚಿತ್ರದ ಪ್ರದರ್ಶನದ ವೇಳೆ ಗುವಾಹಟಿಯಲ್ಲಿ ನಡೆದ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ. ನಾವು ವಿಚಾರಿಸುತ್ತೇವೆ ಮತ್ತು ಅಂತಹ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ, ”ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ.
Bollywood actor Shri @iamsrk called me and we talked today morning at 2 am. He expressed concern about an incident in Guwahati during screening of his film. I assured him that it’s duty of state govt to maintain law & order. We’ll enquire and ensure no such untoward incidents.
— Himanta Biswa Sarma (@himantabiswa) January 22, 2023
“ಶಾರುಖ್ ಖಾನ್ ಯಾರು?” ಎಂದು ಜನವರಿ 21 ರಂದು ಸ್ಥಳೀಯ ವರದಿಗಾರರು ಅವರನ್ನು ಪ್ರಶ್ನಿಸಿದಾಗ ಶರ್ಮಾ ಕಾಮೆಂಟ್ ಹೀಗಿತ್ತು. ಶಾರುಖ್ ಖಾನ್ ಅವರಿಗೆ ಈ ವಿಷಯದ ಬಗ್ಗೆ ಕರೆ ಮಾಡಿದರೆ ವಿಷಯವನ್ನು ಪರಿಶೀಲಿಸುವುದಾಗಿ ಶರ್ಮಾ ಸುದ್ದಿಗಾರರಿಗೆ ತಿಳಿಸಿದರು. ಕಾನೂನು ಸುವ್ಯವಸ್ಥೆ ಉಲ್ಲಂಘಿಸಿ ಪ್ರಕರಣ ದಾಖಲಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.