ಹೊಸದಿಗಂತ ಡಿಜಿಟಲ್ ಡೆಸ್ಕ್ :
ತಿರುವನಂತಪುರಂನಿಂದ ಒಮನ್ನ ಮಸ್ಕತ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಾಪಸ್ ಆಗಿದೆ.
ಐಎಕ್ಸ್ 549 ವಿಮಾನವು ಕೇರಳದ ರಾಜಧಾನಿಯಿಂದ ಇಂದು ಬೆಳಗ್ಗೆ ಟೇಕ್ ಆಫ್ ಆಗಿದ್ದು, ಪೈಲಟ್ ಗಳಲ್ಲಿ ಒಬ್ಬರು ತಾಂತ್ರಿಕ ದೋಷವನ್ನು ಗಮನಿಸಿದ ನಂತರ 9.17ಕ್ಕೆ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದೆ.
ಇನ್ನು ಎಲ್ಲಾ 105 ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಕ್ತಾರರು ತಿಳಿಸಿದ್ದಾರೆ.