ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ (Bharat Jodo) ಅಂತಿಮ ಹಂತ ತಲುಪಿದ್ದು, ಶ್ರೀನಗರದಲ್ಲಿ (Srinagar) ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ.
ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಹೆಚ್ ಡಿ ದೇವೇಗೌಡ (H. D Devegowda) ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಹ್ವಾನಿಸಿದ್ದಾರೆ.
ಆದರೆ ಹೆಚ್. ಡಿ ದೇವೇಗೌಡರು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಈ ಸಂಬಂಧ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ದೇವೇಗೌಡ, ನಾನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಗುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ. ದೇಶದ ಒಗ್ಗೂಡಿವಿಕೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತವಾಗಿದೆ. 3,500 ಕಿಲೋಮೀಟರ್ ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದಾರೆ. ನನ್ನ ಶುಭಾಶಯಗಳನ್ನುತಿಳಿಸಿ ಎಂದು ಪತ್ರದ ಮೂಲಕ ಅಭಿನಂದನೆ ತಿಳಸಿದ್ದಾರೆ.