ಭಾರತ ಜೋಡೊ ಯಾತ್ರೆಗೆ ಬನ್ನಿ: ಹೆಚ್.​ ಡಿ. ದೇವೇಗೌಡರಿಗೆ ಬಂತು ಆಹ್ವಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ (Congress)​ ನಾಯಕ ರಾಹುಲ್​ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ (Bharat Jodo) ಅಂತಿಮ ಹಂತ ತಲುಪಿದ್ದು, ಶ್ರೀನಗರದಲ್ಲಿ (Srinagar) ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ.

ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ನಾಯಕ ಹೆಚ್​ ಡಿ ದೇವೇಗೌಡ (H. D Devegowda) ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಹ್ವಾನಿಸಿದ್ದಾರೆ.

ಆದರೆ ಹೆಚ್. ಡಿ ದೇವೇಗೌಡರು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಈ ಸಂಬಂಧ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ದೇವೇಗೌಡ, ನಾನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಗುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ. ದೇಶದ ಒಗ್ಗೂಡಿವಿಕೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತವಾಗಿದೆ. 3,500 ಕಿಲೋ‌ಮೀಟರ್ ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದಾರೆ. ನನ್ನ ಶುಭಾಶಯಗಳನ್ನುತಿಳಿಸಿ ಎಂದು ಪತ್ರದ ಮೂಲಕ ಅಭಿನಂದನೆ ತಿಳಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!