ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಏರ್ಪೋರ್ಟ್ ನಿರ್ಮಾಣಕ್ಕೆ ಭೂಮಿ ಕೊಟ್ಟ ರೈತರೇ ಇದೀಗ ವಿಮಾನ ನಿಲ್ದಾಣ ಉದ್ಘಾಟನೆಗೆ ವಿರೋಧಿಸುತ್ತಿದ್ದಾರೆ.
ಫೆ. 27ರಂದು ಪ್ರಧಾನಿ ಮೋದಿ ಏರ್ಪೋರ್ಟ್ ಉದ್ಘಾಟನೆ ಮಾಡಲಿದ್ದಾರೆ. ಸೋಗಾನೆಯಲ್ಲಿ ವಿಮಾನ ನಿಲ್ದಾಣ ಇನ್ನೇನು ಲೋಕಾರ್ಪಣೆಗೆ ಸಜ್ಜಾಗಿದೆ. ಸರ್ಕಾರ ನಮ್ಮ ಭರವಸೆಯನ್ನು ಈಡೇರಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ನಿವೇಶನ ಹಾಗೂ ಉದ್ಯೋಗದ ಭರವಸೆಯನ್ನು ಸರ್ಕಾರ ನೀಡಿತ್ತು ಆದರೆ ಇದೀಗ ಯಾವ ಭರವಸೆಯೂ ಈಡೇರಿಲ್ಲ ಎಂದು ರೈತರು ಫೆ.5ಕ್ಕೆ ಪ್ರತಿಭಟನೆಗೆ ಮುಂದಾಗಿದ್ದಾರೆ.
ಬಕರ್ ಹುಕುಂ ಭೂಮಿ ನೀಡಲು ಒಪ್ಪದ ರೈತರಿಗೆ ಪ್ರತಿ ಎಕರೆಗೆ ಎರಡು ಲಕ್ಷ ರೂಪಾಯಿ ಎಕರೆಗೆ, ಒಂದು ನಿವೇಶನ ಹಾಗೂ ಉದ್ಯೋಗದ ಭರವಸೆ ನೀಡಲಾಗಿತ್ತು. ಆದರೆ ಭರವಸೆ ಇನ್ನೂ ಈಡೇರಿಲ್ಲ ಎನ್ನಲಾಗಿದೆ.