ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಜಾತಿ ರಾಜಕಾರಣಕ್ಕೆ ಪ್ರಾಶಸ್ತ್ಯ ನೀಡಿಲ್ಲ. ಯಾವುದೇ ಸಮುದಾಯಕ್ಕೂ ನಾನು ಅವಮಾನ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಿಜೆಪಿ ನಾಯಕರ ಟೀಕೆಯನ್ನು ನಾನು ಗಮನಿಸಿದ್ದೇನೆ. ನಾನು ಸಿಟಿ ರವಿ ವಿಚಾರಕ್ಕೆ ಹೋಗಿಲ್ಲ, ಆದರೂ ನನ್ನ ಬಗ್ಗೆ ಟೀಕೆ ಮಾಡ್ತಾರೆ ಎಂದರು.
ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಸಾರ್ವಜನಿಕರಿಂದ ಅಹವಾಲು ಕೇಳುವಾಗಲೂ ಜಾತಿ ಕೇಳಿಲ್ಲ. ಅಲ್ಲದೇ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಠಿ ಮಾಡಿದ್ದಾರೆಂದು ವಾಗ್ಧಾಳಿ ನಡೆಸಿದರು.
ಕರ್ನಾಟಕಕ್ಕೂ ವಿ ಡಿ ಸಾರ್ವರ್ಕರ್ ಗೂ ಸಂಬಂಧವೇನು.? ಕರ್ನಾಟಕ ರಾಜ್ಯಕ್ಕೂ ಗೋಡ್ಸೆಗೂ ಸಂಬಂಧವೇನು.? ಇವರೆಲ್ಲಾ ಮಹಾತ್ಮಗಾಂಧಿ ಹತ್ಯೆ ಮಾಡಿ ರಾಜ್ಯಕ್ಕೆ ಬಂದಗಿದ್ದಾರೆ. ಭಯದಿಂದ ನಮ್ಮ ರಾಜ್ಯಕ್ಕೆ ಬಂದಿದ್ದಾರೆ. ಸಮಾಜ ಒಡೆಯುವ ಕೆಲಸಕ್ಕೆ ಬಿಜೆಪಿಯವರು ಕೈಹಾಕಿದ್ದಾರೆ ಎಂದು ಹೆಚ್.ಡಿ. ಕೆ. ಕಿಡಿಕಾರಿದರು.