‘ಬಿಜೆಪಿ’ ಕಾರ್ಯಕರ್ತರನ್ನೇ ಗುರಿಯಾಗಿಸಲಾಗಿದೆ : ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಗುಂಡಿಗೆ ಬಲಿಯಾದ ನಾರಾಯಣಪುರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಾಗರ್ ಸಾಹು ಅವರ ಕುಟುಂಬಸ್ಥರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಮಾಡಿದ್ದರು. ಅದೇ ವೇಳೆ ಸಾಗರ್ ಸಾಹು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ನಮ್ಮ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಸಾಗರ್ ಸಾಹು ಎಂಬ ಹಿರಿಯ ಸಹೋದ್ಯೋಗಿಯನ್ನು ನಕ್ಸಲರು ಬರ್ಬರವಾಗಿ ಹತ್ಯೆಗೈದಿರುವುದು ದುಃಖ ತಂದಿದೆ. ನಾವೆಲ್ಲರೂ ದುಃಖಿತರಾಗಿದ್ದೇವೆ. ಛತ್ತೀಸ್‌ಗಢದಲ್ಲಿ ಪ್ರಸ್ತುತ ಸರ್ಕಾರದಲ್ಲಿ ನಕ್ಸಲರ ದಾಳಿ ಹೆಚ್ಚುತ್ತಿದೆ. ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಒಂದು ತಿಂಗಳೊಳಗೆ ನಾವು ಮೂವರು ಸಹೋದ್ಯೋಗಿಗಳನ್ನು ಕಳೆದುಕೊಂಡಿದ್ದೇವೆ ಎಂದು ನಡ್ಡಾ ಹೇಳಿದ್ದಾರೆ.

ಇದು ಇಲ್ಲಿನ ಕಾನೂನು ಸುವ್ಯವಸ್ಥೆ ತೋರಿಸುತ್ತದೆ. ಸ್ಥಳೀಯ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಸಾಗರ್ ಸಾಹು ಒಬ್ಬರೇ ಅಲ್ಲ, ಕೋಟಿಗಟ್ಟಲೆ ಬಿಜೆಪಿ ಕಾರ್ಯಕರ್ತರು ಕುಟುಂಬದೊಂದಿಗೆ ನಿಂತಿದ್ದರು. ನಾವು ಅವರನ್ನು ನೋಡಿಕೊಳ್ಳುತ್ತೇವೆ. ಆದರೆ ನಷ್ಟವನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ನಡ್ಡಾ ಹೇಳಿದ್ದಾರೆ.

ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಸಾಗರ್ ಸಾಹು ಛೋಟೆಡೊಂಗರ್ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಇಬ್ಬರು ಅಪರಿಚಿತ ವ್ಯಕ್ತಿಗಳು ಸಾಹು ಅವರ ಮನೆಗೆ ನುಗ್ಗಿ ಅವರ ಕುಟುಂಬ ಸದಸ್ಯರ ಮುಂದೆ ಗುಂಡು ಹಾರಿಸಿದ್ದಾರೆ. ಗಾಯಾಳು ಸಾಹುವನ್ನು ನಾರಾಯಣಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!