ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ರಿಷಬ್ ಶೆಟ್ಟಿ ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ ಪಡೆದಿದ್ದಾರೆ.
ಪ್ರಶಸ್ತಿ ಸ್ವೀಕರಿಸಿ ಬೆಂಗಳೂರಿಗೆ ಆಗಮಿಸಿದ ರಿಷಬ್ ಸಂತಸ ಹಂಚಿಕೊಂಡರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಮಾಧ್ಯಮದ ಜೊತೆ ಮಾತನಾಡಿದ ರಿಷಬ್ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದರು.
ರಿಷಬ್ ಶೆಟ್ಟಿ ಎಲ್ಲೇ ಹೋದರು ಯಾವುದೇ ಕಾರ್ಯಕ್ರಕ್ಕೆ ಹಾಜರಾದರು ಪಂಚೆಯಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದ ಪ್ರಶಸ್ತಿ ಪಡೆಯುವಾಗಲೂ ರಿಷಬ್ ಪಂಚೆಯಲ್ಲೇ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಪ್ರಶಸ್ತಿ ಕೈಯಲ್ಲಿ ಹಿಡಿದು ರಿಷಬ್ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಸ್ ನೀಡಿದ್ದಾರೆ.
ಹಿಂದಿ ಸಿನಿಮಾಗೆ ಕೊಟ್ಟ ಪ್ರಶಸ್ತಿ ಇದಾಗಿದೆ. ಕನ್ನಡ ಸಿನಿಮಾಗೆ ಅಲ್ಲ. ಪ್ರಶಸ್ತಿ ಸಿಕ್ಕಿದ್ದು ತುಂಬಾ ಖುಷಿ ಆಗಿದೆ. ಜವಾಬ್ಧಾರಿ ಹೆಚ್ಚು ಆಯ್ತು ಅನ್ನಿಸುತ್ತೆ. ಕನ್ನಡ ಸಿನಿಮಾಗಳ ಬಗ್ಗೆ ವಿಶೇಷ ಗೌರವ ಬರ್ತಾ ಇದೆ. ನಮ್ಮ ಟ್ರಡೀಷನ್ನಲ್ಲೇ ಹೋಗಿದ್ದೆ. ಅಲ್ಲಿದ್ದವರೆಲ್ಲಾ ಗುರುತಿಸಿದ್ರು ಎಂದು ಹೇಳಿದರು.
ಬಳಿಕ ಕಾಂತಾರ 2 ಬಗ್ಗೆಯೂ ಮಾತನಾಡಿದ ಅವರು, ಮಾರ್ಚ್ ನಿಂದನೇ ಕಾಂತಾರ-2 ಪ್ರಾರಂಭವಾಗಲಿದೆ ಎಂದು ಬಹಿರಂಗ ಪಡಿಸಿದರು. ‘ಇನ್ಮುಂದೆ ಕಾಂತಾರ 2 ಕೆಲಸ ಶುರು ಮಾಡುತ್ತೇನೆ. ಮಾರ್ಚ್ ನಿಂದ ಫೋನ್ ಆಫ್ ಮಾಡುತ್ತೇನೆ’ ಎಂದು ಹೇಳಿದರು.