ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪುತ್ರನ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಕೆಎಸ್ಡಿಎಲ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಸಿಕ್ಕಿದೆ.
ನ್ಯಾಯಾಮುರ್ತಿ ನಟರಾಜನ್ ಅವರು ಮಾಡಳ್ ವಿರೂಪಾಕ್ಷಪ್ಪಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ಲೋಕಾಯುಕ್ತ ಪೊಲೀಸರು ದಾಖಲೆ ಸಲ್ಲಿಸುವವರೆಗೆ ಹೈಕೋರ್ಟ್ ಏಕಸದಸ್ಯ ಪೀಠ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ನೀಡಿದ್ದು, 5 ಲಕ್ಷ ರೂ. ಮೌಲ್ಯದ ಬಾಂಡ್ ಜೊತೆಗೆ ಶ್ಯೂರಿಟಿ ನೀಡುವಂತೆ ಹೇಳಿದ್ದಾರೆ. ಅಲ್ಲದೆ ಆದೇಶ ತಲುಪಿದ 48 ಗಂಟೆಗಳ ಒಳಗೆ ಲೋಕಾಯುಕ್ತರ ಮುಂದೆ ಹಾಜರಾಗುವಂತೆ ಖಡಕ್ ಸೂಚನೆ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಲಾಗಿದೆ.