ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅನಾಹುತ ಸಂಭವಿಸಿದೆ. ಲ್ಯಾಂಡಿಂಗ್ ವೇಳೆ ಗಾಳಿಯ ರಭಸಕ್ಕೆ ಬ್ಯಾರಿಕೇಡ್ಗಳು ಧರೆಗುರುಳಿವೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಅವುಗಳನ್ನು ಎತ್ತಿ ಸರಿಮಾಡಿದ್ದಾರೆ.
ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಸಚಿವರು ಬರುತ್ತಿದ್ದ ವೇಳೆ ಈ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ವಿಜಯಪುರ ನಗರದ ಸೈನಿಕ ಶಾಲೆ ಹೆಲಿಪ್ಯಾಡ್ನಲ್ಲಿ ಈ ಘಟನೆ ನಡೆದಿದ್ದು, ಲ್ಯಾಂಡಿಂಗ್ಗಾಗಿ ಬ್ಯಾರಿಕೇಡ್ ಹಾಕಲಾಗಿತ್ತು. ಆ ಬ್ಯಾರಿಕೇಡ್ಗಳು ಗಾಳಿಯ ರಭಸಕ್ಕೆ ಬಿದ್ದಿವೆ.