Friday, December 12, 2025

WEATHER | ಕೈಕೊಟ್ಟ ಮಳೆ, ಹೆಚ್ಚಿದ ಚಳಿ: ಮುಂದಿನ 3 ದಿನ ಉತ್ತರ ಒಳನಾಡಿಗೆ ಕೋಲ್ಡ್ ವೇವ್ ಅಲರ್ಟ್!

ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಶುಷ್ಕ ಮತ್ತು ಒಣ ಹವೆಯ ವಾತಾವರಣ ಮುಂದುವರಿದಿದ್ದು, ಮೈಕೊರೆಯುವ ಚಳಿ ಜನರನ್ನು ಕಾಡುತ್ತಿದೆ. ರಾಜ್ಯದಾದ್ಯಂತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಇದೇ ಪರಿಸ್ಥಿತಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಮೂರು ದಿನಗಳ ಕಾಲ ಉತ್ತರ ಒಳನಾಡಿನ ಈ ಕೆಳಗಿನ ಏಳು ಜಿಲ್ಲೆಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ:

ಬೆಳಗಾವಿ

ಬಾಗಲಕೋಟೆ

ಬೀದರ್

ವಿಜಯಪುರ

ಕಲಬುರ್ಗಿ

ರಾಯಚೂರು

ಯಾದಗಿರಿ

ಈ ಮೂರು ದಿನಗಳ ನಂತರ, ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡುಬರುವ ಸಾಧ್ಯತೆ ಇಲ್ಲ. ಈ ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದಲೂ ಒಣ ಹವೆಯ ವಾತಾವರಣವಿದ್ದು, ಇದು ಇಂದೂ ಮುಂದುವರಿಯಲಿದೆ.

ಉತ್ತರ ಒಳನಾಡಿನ ಇತರ ಜಿಲ್ಲೆಗಳಾದ ಹಾವೇರಿ, ಗದಗ, ಧಾರವಾಡ, ಕೊಪ್ಪಳ ಮತ್ತು ವಿಜಯನಗರದಲ್ಲೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಾಮರಾಜನಗರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

error: Content is protected !!