ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸಿ: ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಹುದಿನಗಳ ಕನಸಿನ ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ಒಪ್ಪಿಗೆ ನೀಡಿದೆ.

ಕೇಂದ್ರ ಸರ್ಕಾರವು 9 ವರ್ಷಗಳಿಂದ ಈ ವಿಷಯದಲ್ಲಿ ವಿಳಂಬ ಮಾಡುತ್ತಿದೆ ಎಂದು ಸ್ವಾಮಿ ಹೇಳಿದರು. ಜನವರಿ 19 ರಂದು, ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವೆಂದು ಘೋಷಿಸುವ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರಿದ್ದ ಪೀಠವು, ನಾವು ಈ ವಿಚಾರವನ್ನು ವಿಚಾರಣೆಗೆ ಮೊದಲೇ ಪಟ್ಟಿ ಮಾಡುತ್ತೇವೆ ಎಂದು ಹೇಳಿದೆ.

ರಾಮಸೇತುವನ್ನು ಆಡಮ್‌ನ ಸೇತುವೆ ಎಂದೂ ಕರೆಯಲಾಗುತ್ತದೆ, ಇದು ತಮಿಳುನಾಡಿನ ಆಗ್ನೇಯ ಕರಾವಳಿಯಲ್ಲಿರುವ ಪಂಬನ್ ದ್ವೀಪ ಮತ್ತು ಶ್ರೀಲಂಕಾದ ವಾಯುವ್ಯ ಕರಾವಳಿಯ ಮನ್ನಾರ್ ದ್ವೀಪದ ನಡುವಿನ ಸುಣ್ಣದ ಕಲ್ಲುಗಳ ಸರಪಳಿಯಾಗಿದೆ.ಈ ಬಗ್ಗೆ ನಿರ್ಧಾರಕ್ಕೆ ಬರಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದ ಪೀಠವು,ಸ್ವಾಮಿ ಅವರಿಗೆ ಅಸಮಾಧಾನವಿದ್ದರೆ ಮತ್ತು ಅವರ ಮಧ್ಯಂತರ ಅರ್ಜಿ ವಿಲೇವಾರಿ ಮಾಡಿದರೆ ಅವರು ಮುಂದಿನ ಹಂತಕ್ಕೆ ಹೋಗಲು ಸ್ವತಂತ್ರರು ಎಂದು ಕೂಡ ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!